ವಿಚಾರಣೆ ವೇಳೆ ಅರ್ಜಿದಾರರ ವಕೀಲ ಬಿ.ವಿಕಾರ್ ಅಹಮದ್, ‘ನಗರದಲ್ಲಿ ರಸ್ತೆಗಳು ಗುಂಡಿ ಹೆಚ್ಚಿದ್ದು ವಾಹನ ಅಪಘಾತ ಹೆಚ್ಚುತ್ತಿದ್ದು ಜನರ ಪ್ರಾಣಕ್ಕೆ ಕುತ್ತಾಗಿ ಪರಿಣಮಿಸಿವೆ. ಆದ್ದರಿಂದ ಗುಂಡಿಗಳನ್ನು ಮುಚ್ಚಲು, ರಸ್ತೆ ಉಬ್ಬು ಹಾಗೂ ವಿಭಜಕಗಳನ್ನು ಸೂಕ್ತ ರೀತಿಯಲ್ಲಿ ನಿರ್ಮಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.