ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವು ಸುಮ್ಮನಿದ್ದೆವು ಎಂದು ಜನರು ದೂರಬಾರದು: ನ್ಯಾಯಮೂರ್ತಿ ಚೆಲಮೇಶ್ವರ್

Last Updated 13 ಜನವರಿ 2018, 13:29 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ನ್ಯಾಯಾಂಗ ವ್ಯವಸ್ಥೆ  ಹಾಗೂ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನ್ಯಾಯಾಲಯದ ಕೆಲಸ ಕಾರ್ಯಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಎಂಬಿ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಚೆಲಮೇಶ್ವರ್ ನಾವು ಎಲ್ಲವನ್ನೂ ನೋಡಿಕೊಂಡು ಸುಮ್ಮನಿದ್ದೆವು ಎಂದು ನೀವು ಆಮೇಲೆ ದೂರಬಾರದೆಂಬ ಉದ್ದೇಶದಿಂದ ಈ ಸುದ್ದಿಗೋಷ್ಠಿ ಕರೆದಿದ್ದೇವೆ ಎಂದಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಈ ನಾಲ್ವರು ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್ ಕೊಲಾಜಿಯಂ ಸದಸ್ಯರಾಗಿದ್ದಾರೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿ ನ್ಯಾಯಾಂಗ ವ್ಯವಸ್ಥೆ ಸರಿ ಇಲ್ಲ ಎಂದು ಆರೋಪಿಸಿದ್ದಾರೆ. ಈ ರೀತಿ ಸುದ್ದಿಗೋಷ್ಠಿ ನಡೆಸಲು ನಮಗೇನೂ ಖುಷಿ ಅನಿಸುವುದಿಲ್ಲ.ಆದರೆ ನಡೆಸಲೇ ಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT