ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಮೋಹನ್ ಆಳ್ವ, ‘23 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ವಿರಾಸತ್ ಕಾರ್ಯಕ್ರಮದಲ್ಲಿ ಸಾವಿರಾರು ಕಲಾವಿದರು ಭಾಗವಹಿಸಿದ್ದಾರೆ. ನಾಡಿನ, ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. 25ನೇ ವರ್ಷದ ವಿರಾಸತ್ ಕಾರ್ಯಕ್ರಮವನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಯೋಜಿಸುವ ಅಭಿಲಾಷೆ ಇದೆ’ ಎಂದು ತಿಳಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.