ನವದೆಹಲಿ: ಸುಪ್ರೀಂ ಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ವಿರುದ್ಧ ಮಾಡಿರುವ ಆರೋಪ ‘ಆಂತರಿಕ ವಿಚಾರ’. ಅದನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿ ಹೇಳಿದೆ.
‘ಜನರಿಂದ ತಿರಸ್ಕೃತವಾಗಿರುವ, ಚುನಾವಣೆ ಗೆಲ್ಲಲಾಗದ ಕಾಂಗ್ರೆಸ್ ಪಕ್ಷವು ಬೇರೆಡೆ ಅವಕಾಶಗಳಿಗಾಗಿ ಹುಡುಕುತ್ತಿರುವುದು ನಮಗೆ ಆಶ್ಚರ್ಯ ಮತ್ತು ಬೇಸರ ಉಂಟು ಮಾಡಿದೆ’ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ನ್ಯಾಯಾಂಗದ ಆಂತರಿಕ ವಿಚಾರವನ್ನು ಸಾರ್ವಜನಿಕಗೊಳಿಸುತ್ತಿವೆ ಎಂದೂ ಅವರು ಆರೋಪಿಸಿದ್ದಾರೆ.