ಆದರೆ ಎರಡನೇ ವಿಚಾರಣೆಗೂ ಮುನ್ನವೇ ಅರ್ಜಿಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸಲಾಗಿತ್ತು. ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್ ಮತ್ತು ಎ.ಕೆ.ಸಿಕ್ರಿ ಅವರಿದ್ದ ತ್ರಿಸದಸ್ಯ ಪೀಠವು, ದ್ವಿಸದಸ್ಯ ಪೀಠದಆದೇಶ ರದ್ದುಪಡಿಸಿತ್ತು. ‘ನ್ಯಾಯಾಲಯದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇಂತಹ ವಿಚಾರವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ಆದೇಶಿಸಿತ್ತು.