ಸುನೀಲ್ ಎಂಬಾತನಿಂದ ಸಾಲ ಪಡೆದಿದ್ದ ಸಂತೋಷ್, ಸಕಾಲಕ್ಕೆ ಹಣ ಹಿಂದಿರುಗಿಸಿರಲಿಲ್ಲ. ಹೀಗಾಗಿ, ಅವರಿಂದ ಬೈಕ್ ಹಾಗೂ ಮೊಬೈಲ್ ಕಿತ್ತುಕೊಂಡಿದ್ದ ಸುನೀಲ್, ಸಾಲ ತೀರಿಸಿ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಅವರು, ಪತ್ರ ಬರೆದಿಟ್ಟು ರಾತ್ರಿ ನೇಣು ಹಾಕಿಕೊಂಡಿದ್ದಾರೆ. ಪೋಷಕರು ಬೆಳಿಗ್ಗೆ ಎಚ್ಚರಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.