ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆ ಗಾಜಲಬಾವಿ ಗ್ರಾಮದ ಬಳಿ ನಸುಕಿನಲ್ಲಿ ಅಪಘಾತ: ಮೂವರು ಸ್ಥಳದಲ್ಲೆ ಸಾವು

Last Updated 13 ಜನವರಿ 2018, 3:32 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಗಾಜಲಬಾವಿ ಗ್ರಾಮದ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಗಾರಪೇಟೆ ತಾಲ್ಲೂಕಿನ ಸುಣ್ಣಕುಪ್ಪಂ ಗ್ರಾಮದ ಭಾಸ್ಕರ್ (35), ಪಾರ್ವತಮ್ಮ (38) ಮತ್ತು ಗೌರಮ್ಮ (40) ಮೃತರು. ಘಟನೆಯಲ್ಲಿ ನಾರಾಯಣಪ್ಪ, ಶಂಕರಮ್ಮ, ಕೃಷ್ಣಮೂರ್ತಿ, ಶಂಕರಪ್ಪ ಎಂಬುವರು ಗಾಯಗೊಂಡಿದ್ದಾರೆ.

ಒಂದೇ ಕುಟುಂಬದ ಇವರೆಲ್ಲರೂ ಸರಕು ಸಾಗಣೆ ಅಟೊದಲ್ಲಿ ಮುಳಬಾಗಿಲು ಸಮೀಪದ ಖಾದ್ರಿಪುರದಲ್ಲಿನ ಶನಿಮಹಾತ್ಮ ದೇವಸ್ಥಾನಕ್ಕೆ ಹೋಗಿ ಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಗಾಯಾಳುಗಳನ್ನು ಮುಳಬಾಗಿಲು ಮತ್ತು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT