‘ಅಲಂಕೃತಗೊಂಡ ಎತ್ತಿನ ಗಾಡಿಗಳಲ್ಲಿ, ಭಾರತೀನಗರದ ಮುಖ್ಯ ರಸ್ತೆಗಳಲ್ಲಿ ತಮಟೆ, ನಗಾರಿ, ವಾದ್ಯ ಸಮೇತ ಪೂಜಾ ಕುಣಿತ, ಕೋಲಾಟ ಸೇರಿದಂತೆ ವಿವಿಧ ಜನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳು ಮನೆಗಳಿಂದ ಮಾಡಿ ತಂದ ಚಕ್ಕುಲಿ, ನಿಪ್ಪಟ್ಟು, ರವೆ ಉಂಡೆ, ಕಡ್ಲೆಕಾಯಿ, ಸೌತೆಕಾಯಿ, ಬೇಯಿಸದ ಹಸಿರು ಕಾಳುಗಳು, ತರಕಾರಿ, ಪಾನಕ, ಮಜ್ಜಿಗೆ ಮೊದಲಾದ ತಿಂಡಿ ಪದಾರ್ಥಗಳ ಮಾರಾಟ ಮಾಡಲಿದ್ದಾರೆ. ಭತ್ತ, ರಾಗಿ, ಧಾನ್ಯಗಳ ರಾಶಿ ಪೂಜೆಯೊಡನೆ ಕಾರ್ಯಕ್ರಮ ಉದ್ಘಾಟಿಸಲಾಗುತ್ತದೆ’ ಎಂದರು.