‘ಆನೆಗಳು ಹೋಗುವಾಗ ನಾಯಿಗಳು ಬೊಗಳುತ್ತವೆ’ ಎಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಂಭ್ರಮದಲ್ಲಿ ಮಹದೇವಪ್ಪ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿ, ‘ಯಾರು ಬೊಗಳುತ್ತಾರೆ, ಯಾರು ಆನೆ ರೀತಿ ಇದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಆನೆನೋ, ನಾಯಿನೋ ಎಂಬುದು ಜಗಜ್ಜಾಹೀರಾಗಿದೆ. ಮುಂದಿನ ಬಾರಿಯೂ ತಾವೇ ಮುಖ್ಯಮಂತ್ರಿ ಎನ್ನುತ್ತಿದ್ದ ಅವರು ಈಚೆಗೆ ಅಂಥ ಹೇಳಿಕೆ ನೀಡುವುದನ್ನು ನಿಲ್ಲಿಸಿದ್ದಾರೆ’ ಎಂದು ಲೇವಡಿ ಮಾಡಿದರು.