ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 18,430 ರೇಷ್ಮೆ ಹುಳು ಸಾಕಾಣಿಕೆ ಮನೆಗಳ ನಿರ್ಮಾಣಕ್ಕೆ ₹ 151.95 ಕೋಟಿ ಒದಗಿಸಲಾಗಿದೆ. 15,337 ಹೆಕ್ಟೇರ್ ಪ್ರದೇಶದ ಹಿಪ್ಪು ನೇರಳೆ ತೋಟಕ್ಕೆ ಹನಿ ನೀರಾವರಿ ಅಳವಡಿಸಲು ₹ 122.87 ಕೋಟಿ ಸಹಾಯಧನ ನೀಡಲಾಗಿದೆ ಎಂದರು. ರೇಷ್ಮೆ ಗೂಡು ವಹಿವಾಟಿನಲ್ಲಿ ಪಾರದರ್ಶಕತೆ ತರಲು ಕೊಳ್ಳೇಗಾಲ, ರಾಮನಗರ, ಶಿಡ್ಲಘಟ್ಟ, ಕನಕಪುರ, ಕೋಲಾರ, ಚನ್ನಪಟ್ಟಣ ಮತ್ತು ವಿಜಯಪುರ ರೇಷ್ಮೆ ಗೂಡು ಮಾರುಕಟ್ಟೆಗಳಲ್ಲಿ ಇ– ಹರಾಜು ವ್ಯವಸ್ಥೆ ಜಾರಿಗೆ ತರಲಾಗಿದೆ. ಇತರ ಕಡೆಗಳಲ್ಲೂ ಈ ವ್ಯವಸ್ಥೆ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಕಕೂನ್ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.