ಶಾಸಕ ಎಸ್.ಟಿ.ಸೋಮಶೇಖರ್, ‘ಸರ್ಕಾರಿ ಭೂಮಿಯಲ್ಲಿ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಹಾಗೂ ಉಳುಮೆ ಚೀಟಿ ಪಡೆದಿರುವ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಸುಳ್ಳು ದಾಖಲೆ ನೀಡಿ ಉಳುಮೆ ಚೀಟಿ ಪಡೆದಿರುವ ಶ್ರೀಮಂತರು ಹಾಗೂ ಪ್ರಭಾವಿಗಳಿಗೆ ಯಾವುದೇ ಕಾರಣಕ್ಕೂ ಭೂಮಿ ನೀಡುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.