ಕಳೆದ ಬಾರಿ ಫೈನಲ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತ ತಂಡಕ್ಕೆ ಈ ಬಾರಿ ಬ್ಯಾಟಿಂಗ್ ಮಾಂತ್ರಿಕ ರಾಹುಲ್ ದ್ರಾವಿಡ್ ತರಬೇತಿ ನೀಡಿದ್ದಾರೆ. ಪೃಥ್ವಿ ಶಾ ನಾಯಕತ್ವದಲ್ಲಿ ಪ್ರತಿಭಾವಂತ ಆಟಗಾರರು ಇರುವುದರಿಂದ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದೇ ಬಿಂಬಿತವಾಗಿದೆ. ಟೂರ್ನಿ ಆರಂಭವಾಗುವುದಕ್ಕೂ ಒಂದು ವಾರ ಮೊದಲೇ ಇಲ್ಲಿಗೆ ಬಂದಿರುವ ತಂಡ ಪರಿಸ್ಥಿತಿಗೆ ಚೆನ್ನಾಗಿ ಹೊಂದಿಕೊಂಡಿರುವುದು ಕೂಡ ವಿಶ್ವಾಸ ಹೆಚ್ಚಲು ಕಾರಣವಾಗಿದೆ.