ಮದ್ದೂರು: ಪಟ್ಟಣಕ್ಕೆ ನ. 19ರಂದು ಪರಿವರ್ತನಾ ಯಾತ್ರೆ ಬರಲಿದ್ದು, ತಾಲ್ಲೂಕಿನಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕುಎಂದು ಬಿಜೆಪಿ ಕ್ಷೇತ್ರ ಘಟಕ ಅಧ್ಯಕ್ಷ ಲಕ್ಷ್ಮಣ್ಕುಮಾರ್ ಮನವಿ ಮಾಡಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಚಿಕ್ಕರಸಿನಕೆರೆ ಹಾಗೂ ಭಾರತೀನಗರ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ನೂರಾರು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಎಂ.ಸಿ.ಸಿದ್ದು, ಜಿ.ಸಿ.ಮಹೇಂದ್ರ,
ನಗರ ಘಟಕ ಅಧ್ಯಕ್ಷ ವೀರಭದ್ರಸ್ವಾಮಿ, ಮುಖಂಡರಾದ ಕೆಂಪುಬೋರಯ್ಯ, ಜಿ.ಅರವಿಂದ್, ಶಿವಣ್ಣ, ಜಗನ್ನಾಥ್, ಶ್ರೇಯಸ್, ಸತೀಶ್, ದಾಕ್ಷಾಯಿಣಿ, ಗುರುಮಲ್ಲೇಶ್, ಮೂಗೂರಯ್ಯ, ಮಲ್ಲೇಶ್ ಈ ಸಂದರ್ಭದಲ್ಲಿ ಇದ್ದರು.