ಶ್ರೀರಂಗಪಟ್ಟಣ: ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಬಳಿ ನೀರಿನ ಕೊಳವೆ ಒಡೆದು ಹಲವು ದಿನಗಳಿಂದ ಹೆದ್ದಾರಿಯಲ್ಲಿ ನೀರು ಹರಿಯುತ್ತಿರುವುದರಿಂದ ರಸ್ತೆಯಲ್ಲಿ ಗುಂಡಿಯುಂಟಾಗಿದೆ. ಗ್ರಾಮ ಪಂಚಾಯಿತಿ ಎದುರೇ ಈ ಅವ್ಯವಸ್ಥೆ ಉಂಟಾಗಿದೆ. ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ನೀರು ಹರಿಯುತ್ತಿದೆ. ಮಂಡಿಯುದ್ದ ಗುಂಡಿ ನಿರ್ಮಾಣವಾಗಿದ್ದು ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ.