ನಗರದ ರಾಜೇಂದ್ರ ಗಂಜ್ ವೃತ್ತದಿಂದ ಆರಂಭಗೊಂಡ ಮ್ಯಾರಾಥಾನ್ ಓಟಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರಬಾಬು ಅವರು ಚಾಲನೆ ನೀಡಿದರು.
ಗಂಜ್ ವೃತ್ತದಿಂದ ಗೋಶಾಲ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಸಂಚಾರ ಪೊಲೀಸ್ ಠಾಣೆವರೆಗೆ ಮ್ಯಾರಾಥಾನ್ ಓಟ ನಡೆಯಿತು. ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಣೆ ಮಾಡಲಾಯಿತು.