ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆ ಸಮೀಪದ ತೋಟತಾಡಿ ಮನೆಯ ಬೈಲಂಗಡಿ ಗಾಂದೋಟ್ಯ ಮನೆಯ ನಿವಾಸಿ ಶ್ರೀಹರಿ ಅಲಿಯಾಸ್ ಹರೀಶ್ ದೇವಾಡಿಗ ಅಲಿಯಾಸ್ ಕಕ್ಕಿಂಜೆ ಹರೀಶ್ (22) ಬಂಧಿತ ಯುವಕ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ನಗರದ ಪಂಪ್ವೆಲ್ ಬಳಿ ಶನಿವಾರ ಬೆಳಿಗ್ಗೆ ಆರೋಪಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ತಿಳಿಸಿದ್ದಾರೆ.