ಮೊಬೈಲ್ ಕಳ್ಳತನ ಪ್ರಕರಣದಲ್ಲಿ 2014ರ ಮೇ ತಿಂಗಳಿನಲ್ಲಿ ಶ್ರೀಜಿತ್ ಸಹೋದರ ಶ್ರೀಜೀವ್ ಅವರನ್ನು ಪರಸ್ಸಾಲ ಪೊಲೀಸರು ಬಂಧಿಸಿದ್ದರು. ಎರಡು ದಿನಗಳ ಬಳಿಕ ಮನೆಯವರಿಗೆ ಕರೆ ಮಾಡಿದ್ದ ಪೊಲೀಸರು, ಶ್ರೀಜೀವ್ ಠಾಣೆಯಲ್ಲಿ ವಿಷಸೇವಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದರು. ಇದಾದ ಬಳಿಕ, ಪೊಲೀಸ್ ದೂರುಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಕೇರಳ ಸರ್ಕಾರವು ಕುಟುಂಬದವರಿಗೆ ₹10 ಲಕ್ಷ ಪರಿಹಾರ ವಿತರಿಸಿತ್ತು.