‘ರಾಜಕೀಯ ಕ್ರಮಗಳು ಮತ್ತು ಸೇನಾ ಕಾರ್ಯಾಚರಣೆಗಳು ಏಕಕಾಲದಲ್ಲಿ ಆಗಬೇಕು. ಕೆಲವು ತಿಂಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರ ವಿವಾದದ ಸಂಧಾನಕರನಾಗಿ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ದಿನೇಶ್ವರ್ ಶರ್ಮಾ ಅವರನ್ನು ಸರ್ಕಾರ ನೇಮಿಸಿದೆ. ಅಲ್ಲಿನ ಜನರ ಎದುರು ಸರ್ಕಾರದ ಪ್ರತಿನಿಧಿಯಾಗಿ ಅವರು ನಿಂತಿದ್ದಾರೆ. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ರಾಜಕೀಯ ಮಟ್ಟದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಅವರು ಮಾಡುತ್ತಾರೆ. ಅದೇ ಸಂದರ್ಭದಲ್ಲಿ ಭಯೋತ್ಪಾದನೆಯನ್ನು ಹತ್ತಿಕ್ಕುವ ಕೆಲಸವನ್ನು ಸೇನೆ ಮಾಡಬೇಕು’ ಎಂದು ಅವರು ವಿವರಿಸಿದ್ದಾರೆ.