ವಿಶೇಷ ಪೂಜೆಯ ಅಂಗವಾಗಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಹತ್ತಿಯಿಂದ ಸಿಂಗರಿಸಲಾಗಿತ್ತು. ಮುಂಜಾನೆ 6.30ಕ್ಕೆ ಅರ್ಚಕ ಸೀತಾರಾಂ ಮಹಾಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಪಿ.ಎಸ್. ಮೂರ್ತಿ, ಅವರ ಪತ್ನಿ ಶಶಿಕಲಾ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಡಿ.ಸಿ.ಮೋಹನ್, ಸದಸ್ಯರಾದ ಅಂಜಲಿ ಮೋಹನ್, ಷಣ್ಮುಖಪ್ಪ, ಗರಗಜ್ಜರ ಸಿದ್ಧಪ್ಪ ಹಾಗೂ ದೇವಸ್ಥಾನ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.