ಉದ್ಘಾಟನೆ ಬಳಿಕ ಮಾತನಾಡಿದ ಪಕ್ಷದ ಅಧ್ಯಕ್ಷ ಡಾ.ಅಯ್ಯಪ್ಪ ಅವರು, ‘ದಿನಕ್ಕೆ ಐದು ತರಹ ಡ್ರೆಸ್ ಹಾಕುವ ಪ್ರಧಾನಿ ರೈತರ ಕೈ ಹಿಡಿಯೋದಿಲ್ಲ. ಪ್ರಧಾನಿ ಭಾಷಣ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಮೋದಿ ಬರೀ ಯುದ್ಧದ ಬಗ್ಗೆ ಮಾತನಾಡುತ್ತಾರೆ. ನಿಮಗೆ ಅನ್ನ ಬೇಕಾ, ಯುದ್ಧ ಬೇಕಾ’ ಎಂದು ಜನರ ಮುಂದೆ ಪ್ರಶ್ನೆ ಇಟ್ಟರು.