‘ವಡ್ಡರ ಮೂಲವೃತ್ತಿ ಕಲ್ಲ ಗಣಿಗಾರಿಕೆ ನಿಂತು ಹೋಗಿದೆ. ಕಲ್ಲು ಗಣಿಗಾರಿಕೆಯನ್ನು ಸರ್ಕಾರ ಪ್ರಾರಂಭಿಸಬೇಕು’ ಎಂದು ಅವರು ಒತ್ತಾಯಿಸಿದರು. ತಾಲ್ಲೂಕು ಪಂಚಾಯಿತಿ ಇಒ ಭಾರತಿ ಚಲುವಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಎಸ್.ಗುಣಾರಿ, ದೈಹಿಕ ಶಿಕ್ಷಣಾಧಿಕಾರಿ ಎ.ಎಂ.ಬಿರಾದಾರ, ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ಭೋವಿ ಸಮಾಜ ತಾಲ್ಲೂಕು ಘಟಕದ ಅಧ್ಯಕ್ಷ ಪಂಡಿತ ಯಂಪೂರೆ, ಆಶ್ರಯ ಸಮಿತಿ ಸದಸ್ಯ ನಾಗಪ್ಪ ಪಾತ್ರೋಟಿ ವೇದಿಕೆಯಲ್ಲಿದ್ದರು. ತಹಶೀಲ್ದಾರ್ ವೀರೇಶ ಬಿರಾದಾರ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ವಿ.ಎಸ್.ಪಾಟೀಲ ನಿರೂಪಿಸಿದರು.