ಒಂದರಿಂದ ಹತ್ನನೆಯ ತರಗತಿವರೆಗಿನ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಸಾಧನೆಯನ್ನು ‘ಶಿಕ್ಷಣ ಕಿರಣ’ ಯೋಜನೆಯಡಿ ಸತತ ಎರಡನೆಯ ವರ್ಷ ಗಮನಿಸಲಾಗುತ್ತಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಕೇಂದ್ರೀಯ ಪಠ್ಯ, ರಾಜ್ಯ ಪಠ್ಯವೆಂಬ ಭೇದವಿಲ್ಲದೆ ರಾಜ್ಯದಲ್ಲಿನ ಎಲ್ಲ ಶಾಲೆಗಳ ಪ್ರತಿಯೊಬ್ಬ ವಿದ್ಯಾರ್ಥಿಗೂ ಈ ಯೋಜನೆಯಡಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗಿದೆ ಎಂದು ಸೇಟ್ ಹೇಳಿದರು.