‘ಸ್ವಯಂ ಘೋಷಿತ ಬುದ್ಧಿಜೀವಿಗಳು, ಎಡಬಿಡಂಗಿಗಳು ಕಾರ್ಯಕ್ರಮ ಮಾಡಿ, ಧಾರ್ಮಿಕ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದಾರೆ. ಇಲ್ಲಿ ಶುದ್ಧೀಕರಣ ಕಾರ್ಯ ಮಾಡಲಾಗುತ್ತದೆ’ ಎಂದು ಭಾನುವಾರವೇ ಪತ್ರಿಕಾ ಹೇಳಿಕೆ ನೀಡಿದ್ದ ಮರಾಠೆ, ಪಕ್ಷದ ಸ್ಥಳೀಯ ಪ್ರಮುಖರಾದ ಗಣಪತಿ ನಾಯ್ಕ, ನಂದನ ಸಾಗರ, ರೇಖಾ ಹೆಗಡೆ, ವೀಣಾ ಭಟ್ಟ, ಸುರೇಶ ಶೆಟ್ಟಿ, ರವೀಶ ಹೆಗಡೆ, ಸುದರ್ಶನ ವೈದ್ಯ ಅವರೊಂದಿಗೆ ಮಠದ ಆವರಣದಲ್ಲಿ ಸೋಮವಾರ ಗೋಮೂತ್ರ ಸಿಂಪಡಿಸಿದರು.