‘ಯಡಿಯೂರಿನ ಅವರು ಬಸ್ ನಿಲ್ದಾಣ ಬಳಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸದ ಸ್ಥಳದಲ್ಲಿ ಅವರಿಗೂ ಹಾಗೂ ಸ್ನೇಹಿತ ರಾಘವೇಂದ್ರ ನಡುವೆ ಹಣಕಾಸಿನ ವಿಷಯವಾಗಿ ಜಗಳವಾಗಿತ್ತು. ಮಾತಿನ ಚಕಮಕಿ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆಗ ರಾಘವೇಂದ್ರ, ಚಾಕುವಿನಿಂದ ಹೊನ್ನಪ್ಪ ಕತ್ತಿನ ಭಾಗಕ್ಕೆ ಇರಿದಿದ್ದ. ಅದನ್ನು ಗಮನಿಸಿದ್ದ ಸ್ಥಳೀಯರು, ಜಗಳ ಬಿಡಿಸಿ ಹೊನ್ನಪ್ಪ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು’ ಎಂದು ಪೊಲೀಸರು ತಿಳಿಸಿದರು.