ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕನ ಕೊಲೆಗೆ ಯತ್ನ

Last Updated 15 ಜನವರಿ 2018, 20:11 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್‌.ಪುರ ಬಳಿ ಕೂಲಿ ಕಾರ್ಮಿಕ ಹೊನ್ನಪ್ಪ (45) ಎಂಬುವರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ.

‘ಯಡಿಯೂರಿನ ಅವರು ಬಸ್‌ ನಿಲ್ದಾಣ ಬಳಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸದ ಸ್ಥಳದಲ್ಲಿ ಅವರಿಗೂ ಹಾಗೂ ಸ್ನೇಹಿತ ರಾಘವೇಂದ್ರ ನಡುವೆ ಹಣಕಾಸಿನ ವಿಷಯವಾಗಿ ಜಗಳವಾಗಿತ್ತು. ಮಾತಿನ ಚಕಮಕಿ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆಗ ರಾಘವೇಂದ್ರ, ಚಾಕುವಿನಿಂದ ಹೊನ್ನಪ್ಪ ಕತ್ತಿನ ಭಾಗಕ್ಕೆ ಇರಿದಿದ್ದ. ಅದನ್ನು ಗಮನಿಸಿದ್ದ ಸ್ಥಳೀಯರು, ಜಗಳ ಬಿಡಿಸಿ ಹೊನ್ನಪ್ಪ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಬೌರಿಂಗ್ ಆಸ್ಪತ್ರೆಯಲ್ಲಿ ಹೊನ್ನಪ್ಪ ಚಿಕಿತ್ಸೆ ಪಡೆಯುತ್ತಿದ್ದಾನೆ. ಖರ್ಚಿಗೆ ಹಣ ಕೊಡದಿದ್ದರಿಂದ ರಾಘವೇಂದ್ರ ಈ ಕೃತ್ಯ ಎಸಗಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT