ಬಿಜೆಪಿಯವರ ಶುದ್ಧಿ ಕಾರ್ಯ ಕುರಿತು #justasking ಎಂದು ಮಂಗಳವಾರ ಟ್ವೀಟ್ ಮಾಡಿರುವ ಪ್ರಕಾಶ್ ರೈ, ‘ನಾನು ಶಿರಸಿ ಪಟ್ಟಣದಲ್ಲಿ ಮಾತನಾಡಿದೆ... ಬಿಜೆಪಿ ಕಾರ್ಯಕರ್ತರು ವೇದಿಕೆಯನ್ನು ಸ್ವಚ್ಛಗೊಳಿಸಿ, ಶುದ್ಧೀಕರಿಸುತ್ತಿದ್ದಾರೆ... ಹಸುವಿನ ಮೂತ್ರವನ್ನು(ದೈವಿಕ ಗೊಮೂತ್ರ) ಚಿಮುಕಿಸುವ ಮೂಲಕ......, ನಾನು ಎಲ್ಲಿಗೇ ಹೋಗುತ್ತಿದ್ದರೂ ಈ ಶುದ್ಧೀಕರಣ ಮತ್ತು ಸ್ವಚ್ಛತೆ ಸೇವೆಯನ್ನು ನೀವು ಮುಂದುವರಿಸುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.