ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಗೋವಾ ಸಿ.ಎಂ ಮನವೊಲಿಸಿ ಸಂಧಾನ ನಡೆಸುವ ಪತ್ರ ತಂದಿದ್ದರು. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೋವಾದ ಕಾಂಗ್ರೆಸ್ ನಾಯಕರ ಮನವೊಲಿಸಿ ಮಹದಾಯಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸದಂತೆ ನೋಡಿಕೊಳ್ಳಬೇಕಿತ್ತು. ಆದರೆ ಅವರು ಈ ವಿಚಾರದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.