ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ: ‘ಪದ್ಮಾವತ್’ಗೆ ನಿಷೇಧ

Last Updated 16 ಜನವರಿ 2018, 19:30 IST
ಅಕ್ಷರ ಗಾತ್ರ

ಚಂಡಿಗಡ: ವಿರೋಧಕ್ಕೆ ಗುರಿಯಾದ, ಸಂಜಯ್‌ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರವನ್ನು ಹರಿಯಾಣದಲ್ಲಿ ಪ್ರದರ್ಶಿಸುವುದಕ್ಕೆ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ನೇತೃತ್ವದ ಸರ್ಕಾರ ತಡೆ ನೀಡಿದೆ.

‘ಪದ್ಮಾವತಿ/ ಪದ್ಮಾವತ್ ಚಿತ್ರವನ್ನು ಹರಿಯಾಣದಲ್ಲಿ ನಿಷೇಧಿಸಲಾಗಿದೆ’ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

‘ರಾಣಿ ಪದ್ಮಾವತಿ ಅವರ ವರ್ಚಸ್ಸು ಕೆಡುವಂತೆ ಬನ್ಸಾಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಲಕ್ಷಾಂತರ ಜನರ ಭಾವನೆಯನ್ನು ನೋಯಿಸಿದೆ. ಖಂಡಿತವಾಗಿಯೂ ರಾಜ್ಯದಲ್ಲಿ ಈ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಅನಿಲ್ ಈ ಹಿಂದೆ ಹೇಳಿದ್ದರು.

‘ಪದ್ಮಾವತ್’ ಇದೇ 25ರಂದು ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT