ಪದಾಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಕೆಪಿಸಿಸಿ ಬಿಡುಗಡೆ ಮಾಡಿದೆ. ‘ವಸ್ತುಸ್ಥಿತಿ ಅರಿಯಲು ತಕ್ಷಣಕ್ಕೆ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ವರದಿ ನೀಡುವುದು, ಕೆಪಿಸಿಸಿಯಿಂದ ಆಚರಿಸಲಾಗುವ ಎಲ್ಲ ವಾರ್ಷಿಕ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಮಾಡಬೇಕು, ವಂದೇ ಮಾತರಂ ಕಡ್ಡಾಯವಾಗಿ ಹಾಡಬೇಕು, ಸ್ಥಳೀಯ ನಾಯಕರಲ್ಲಿ ಇರಬಹುದಾದ ಭಿನ್ನಾಭಿಪ್ರಾಯ ನಿವಾರಣೆಗೆ ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡ
ಬೇಕು, ಸಾಧ್ಯವಾಗದಿದ್ದಲ್ಲಿ ತಕ್ಷಣ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಬೇಕು’ ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.