ಪ್ರತಿ ವರ್ಷ ಜಾನಪದ ತಜ್ಞ ಡಾ. ಮೀರಾಸಾಬಿಹಳ್ಳಿ ಶಿವಣ್ಣ ಅವರ ಹೆಸರಿನಲ್ಲಿ ನೀಡುವ ‘ಸಾಹಿತ್ಯಶ್ರೀ’ ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಹೊಂದಿದೆ. ಪಟೇಲ್ ಬೊಮ್ಮನಗೌಡ ನೆನಪಿನಲ್ಲಿ ಕೊಡಮಾಡುವ ’ತತ್ವಶ್ರೀ’ ಪ್ರಶಸ್ತಿಯು ₹5 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಇದೇ 20ರಂದು ಹಿರಿಯೂರಿನ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.