‘ಮುಖ್ಯಮಂತ್ರಿಯಾಗಿದ್ದಾಗ ನೆಲಮಂಗಲ ಅಭಿವೃದ್ಧಿಗೆ ₹850 ಕೋಟಿ ನೀಡಿದ್ದೇನೆ. 4ಸಾವಿರ ಮನೆಗಳು, ವಾಲ್ಮೀಕಿ, ಅಂಬೇಡ್ಕರ್, ಭೋವಿ, ಅಗ್ನಿಶಾಮಕ ಠಾಣೆ, ನ್ಯಾಯಾಲಯ ನಿರ್ಮಾಣವಾಗಿದೆ. ನಮ್ಮ ಸರ್ಕಾರ ಮಂಜೂರು ಮಾಡಿದ್ದ ಬಿ.ಎಚ್.ರಸ್ತೆ ಕಾಮಗಾರಿಯನ್ನು ಈಗ ಕೈಗೆತ್ತಿಕೊಳ್ಳಲಾಗಿದೆ. ಇದು ಸ್ಥಳೀಯ ಶಾಸಕರ ಅಭಿವೃದ್ಧಿಯ ಬಗೆಗೆ ಇರುವ ಅಸಡ್ಡೆಯನ್ನು ತೋರಿಸುತ್ತದೆ’ ಎಂದರು.