ಪ್ರಕರಣದ ಪ್ರತಿವಾದಿಗಳಾದ ವಿಧಾನಸಭೆ ಸ್ಪೀಕರ್, ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ, ಕಾಗದ ಪತ್ರ ಸಮಿತಿ ಅಧ್ಯಕ್ಷ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಲೋಕಾಯುಕ್ತ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆ ನಡೆಸಲು ಕಾಗದ ಪತ್ರಗಳ ಸಮಿತಿ ವಿಧಾನಸಭೆ ಸ್ಪೀಕರ್ ಅವರಿಗೆ ಶಿಫಾರಸು ಮಾಡಿತ್ತು. ಇದನ್ನು ಲೋಕಾಯುಕ್ತ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.