ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲುಸೀಮೆಯ 6 ಜಿಲ್ಲೆಗಳ ನೀರಿನ ಬವಣೆ ನೀಗಿಸದೆ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಪಶ್ಚಿಮ ಘಟ್ಟಗಳ ನದಿಗಳಿಗೆ ಸಮರ್ಪಕವಾದ ಅಣೆಕಟ್ಟುಗಳು ಇಲ್ಲದೆ ಕುಡಿಯುವ ನೀರು ಸಮುದ್ರದ ಪಾಲಾಗುತ್ತಿದೆ. ಈ ನೀರನ್ನು ಸಂಗ್ರಹಿಸಿ ಯೋಗ್ಯವಾದ ರೀತಿಯಲ್ಲಿ ಸರಬರಾಜು ಮಾಡಿದರೆ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದರು.