ಚಿಕ್ಕಬಳ್ಳಾಪುರ: ಕಳೆದ ಒಂದು ವರ್ಷದಿಂದ ಜಿಲ್ಲಾ ಪಂಚಾಯಿತಿಯಲ್ಲಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಅವರ ‘ಪದತ್ಯಾಗ’ಕ್ಕೆ ಒತ್ತಾಯಿಸಿ ‘ಸ್ವಪ
ಕ್ಷೀಯ’ರಲ್ಲೇ ಕಾಣಿಸಿಕೊಂಡ ಬಂಡಾಯದ ಬಿಸಿ ಕೊನೆಗೂ ತಣ್ಣಗಾಗಲಿಲ್ಲ. ಇದೀಗ ಹೈಕಮಾಂಡ್ ಒತ್ತಡಕ್ಕೆ ಮಣಿದ ಕೇಶವರೆಡ್ಡಿ ಅವರು ಗುರುವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.