ಗುತ್ತಿಗೆ ನೌಕರರು ಸೇವಾಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೊರಗುತ್ತಿಗೆ ಪೌರಕಾರ್ಮಿಕರು ಪ್ರತಿನಿತ್ಯ ಮುಂಜಾನೆ 5.50ಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ಹಾಜರಾತಿ ದಾಖಲಿಸಬೇಕು. ಇಲ್ಲದಿದ್ದರೆ ಅವರಿಗೆ ಅವರಿಗೆ ಅಂದಿನ ವೇತನ ಸಿಗುವುದಿಲ್ಲ. ಆದ್ದರಿಂದ ಶ್ರಮಜೀವಿಗಳಾದ ಹೊರಗುತ್ತಿಗೆ ಪೌರಕಾರ್ಮಿಕರು, ವಾಲ್ವ್ಮನ್ ಮತ್ತು ಕಂಪ್ಯೂಟರ್ ಆಪರೇಟರ್ಗಳಿಗೆ ಮಾನವೀಯತೆ ದೃಷ್ಟಿಯಿಂದ ಸಮಾನ ಕೆಲಸಕ್ಕೆ ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.