ಗ್ರಂಥಗಳನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಅವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಇಡಲಾಗಿಲ್ಲ. ವಿದ್ಯಾಮಾನ್ಯ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಸಾಹಿತಿ ಬನ್ನಂಜೆ ಗೋವಿಂದಾಚಾರ್ಯ ಅವರ ಸಹಾಯದಿಂದ ಡಿಜಿಟಲೀಕರಣವನ್ನೂ ಮಾಡಲಾಗಿದೆ. ಈ ಪುಸ್ತಕದಲ್ಲಿ ನಮ್ಮ ದಿನ ನಿತ್ಯ ಬದುಕು, ಆಯುರ್ವೇದ, ಜ್ಯೋತಿಷ, ವೇದಾಂತ, ಗೀತೆ, ಇತಿಹಾಸ ಸೇರಿದಂತೆ 37 ವಿಷಯಗಳಿಗೆ ಸಂಬಂಧಿಸಿದ ಮಾಹಿತಿಗಳು ಇವೆ.