ಬೆಂಗಳೂರು: ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸುವ ಮತ್ತು ಅದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಸೂದೆ ವಿರೋಧಿಸಿ ಇದೇ 20ರಂದು ಪುರಭವನದ ಎದುರು ಮಧ್ಯಾಹ್ನ 12ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂಲೀಗ್ ತಿಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲೀಗ್ನ ಅಧ್ಯಕ್ಷ ಡಾ.ಮುಹಮ್ಮದ್ ಫಾರೂಕ್, ‘ಕೇಂದ್ರವು ಮುಸ್ಲಿಮರ ಸಂಸ್ಕೃತಿ ನಾಶ ಮಾಡಲು ಮುಂದಾಗಿದೆ. ಮುಸ್ಲಿಮರ ಭಾವನೆ ಮೇಲೆ ದಾಳಿ ಮಾಡುವ ಹುನ್ನಾರ ನಡೆಸಿದೆ’ ಎಂದರು.