ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಕುಟುಂಬಗಳ ನಿರ್ವಹಣೆಗೆ ₹1000 ಕೋಟಿ ನಿಧಿ ಸ್ಥಾಪನೆಗೆ ಆಗ್ರಹ

ರೈತ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ
Last Updated 18 ಜನವರಿ 2018, 19:48 IST
ಅಕ್ಷರ ಗಾತ್ರ

ಬೆಂಗಳೂರು: ಬರಗಾಲದಿಂದ ಸಂಕಷ್ಟಕ್ಕೆ ಸಿಲುಕುವ ಪ್ರತಿ ರೈತ ಕುಟುಂಬದ ಜೀವನ ನಿರ್ವಹಣೆ, ಆರೋಗ್ಯ ವೆಚ್ಚ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹1000 ಕೋಟಿ ನಿಧಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವಿಧಾನಸೌಧದಲ್ಲಿ ಗುರುವಾರ ಆರಂಭಗೊಂಡ ಆಯವ್ಯಯ ಪೂರ್ವ ಸಿದ್ಧತಾ ಸಭೆಯಲ್ಲಿ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಮಾತನಾಡಿ, ಬರ ನಿರ್ವಹಣೆಗೆ ಶಾಶ್ವತ ಪರಿಹಾರ ನಿಧಿ ಸ್ಥಾಪಿಸಬೇಕು ಎಂದು ಮನವಿ ಮಾಡಿದರು. ಸುಮಾರು ಮೂರು ಗಂಟೆ ಅವಧಿ ನಡೆದ ಸಭೆಯಲ್ಲಿ ರೈತರು ಎದುರಿಸುತ್ತಿರುವ ಸವಾಲುಗಳನ್ನು ಮುಖ್ಯಮಂತ್ರಿ ಮುಂದಿಟ್ಟರು.

ಚುನಾವಣೆಯಲ್ಲಿ ಮತ ಗಳಿಸುವುದರ ಉದ್ದೇಶಕ್ಕಾಗಿ ಬಜೆಟ್‌ ಮಂಡಿಸುವುದು ಬೇಡ. ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಕೊಡಿಸಬೇಕು. ಡಾ.ಸ್ವಾಮಿನಾಥನ್‌ ವರದಿ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೃಷಿ ಬೆಲೆ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಬೇಕು. ರೈತ ಉತ್ಪನ್ನಗಳ ಬೆಲೆ ಕುಸಿದಾಗ ಸರ್ಕಾರವೇ ಮಧ್ಯ ಪ್ರವೇಶಿಸಿ, ಲಾಭದಾಯಕ ಬೆಲೆಯಲ್ಲಿ ಖರೀದಿಸಲು ₹ 25,000 ಕೋಟಿ ಆವರ್ತನಿಧಿ ಸ್ಥಾಪಿಸಬೇಕು ಎಂದೂ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT