ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಚಾರಿಗಳ ಸುರಕ್ಷತೆಗೆ ‘ನಡೆಯಲು ಬಿಡಿ’ ಅಭಿಯಾನ

Last Updated 18 ಜನವರಿ 2018, 20:36 IST
ಅಕ್ಷರ ಗಾತ್ರ

ಬೆಂಗಳೂರು: ಪಾದಚಾರಿಗಳ ಸುರಕ್ಷತೆಗಾಗಿ ‘ನಡೆಯಲು ಬಿಡಿ’ ಎಂಬ ಘೋಷವಾಕ್ಯದಡಿ ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆಯು ಅಭಿಯಾನ ಆರಂಭಿಸಿದೆ.

ಪಾದಚಾರಿಗಳು ಸುರಕ್ಷಿತವಾಗಿ ರಸ್ತೆ ದಾಟಲು ನಗರದ ಎಲ್ಲ ಸಿಗ್ನಲ್‌ಗಳಲ್ಲೂ ಪೆಲಿಕಾನ್ ಬಟನ್‌ಗಳನ್ನು (ಪಾದಾಚಾರಿ ಗುಂಡಿ) ಅಳವಡಿಸಬೇಕು ಎಂದು ಒತ್ತಾಯಿಸಿ ರಿಚ್ಮಂಡ್‌ ಟೌನ್‌ ಬಳಿ ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಶ್ರೀನಿವಾಸ್ ಅಲವಿಲ್ಲಿ ಹೇಳಿದರು.

ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಸಿಗ್ನಲ್‌ ಬಿದ್ದರೂ ನಿಯಮ ಉಲ್ಲಂಘಿಸಿ ಸಂಚಾರ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದ ರಸ್ತೆ ದಾಟುವ ವೇಳೆ ಪಾದಚಾರಿಗಳು ಅಪಘಾತಕ್ಕೀಡಾಗುತ್ತಿದ್ದಾರೆ. ಹೀಗಾಗಿ, ಅವರ ಸುರಕ್ಷತೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.‌

ನಗರದಲ್ಲಿ ನೂರಾರು ಸ್ಕೈವಾಕ್‌ಗಳಿದ್ದರೂ ಅವುಗಳನ್ನು ಜನ ಬಳಸುತ್ತಿಲ್ಲ. ಹಿರಿಯರಿಗೆ ಸ್ಕೈವಾಕ್‌ಗಳನ್ನು ಹತ್ತಿ ಹೋಗಲು ಸಾಧ್ಯವಾಗದೆ ರಸ್ತೆ ದಾಟಲು ಮುಂದಾಗುತ್ತಿದ್ದಾರೆ. ಹೀಗಾಗಿ, ಪೆಲಿಕಾನ್ ಬಟನ್‌ಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT