‘ಸರ್ಕಾರಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಸಿಬ್ಬಂದಿ ಪಾತ್ರ ಬಹಳ ಮುಖ್ಯ. ಸಿಬ್ಬಂದಿಯು ಶಾಲೆಗಳಲ್ಲಿ ಆಹಾರ ಪದಾರ್ಥಗಳ ಸಂಗ್ರಹಣೆ, ಅಡುಗೆ ಸಿದ್ಧಪಡಿಸಬೇಕಾದರೆ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು, ಮಕ್ಕಳ ಸುರಕ್ಷತೆ, ಅಗ್ನಿ ಅನಾಹುತ ತಡೆ, ಬೆಂಕಿ ನಂದಿಸುವಿಕೆ, ಅಗ್ನಿನಂದಕ ಸಲಕರಣೆಗಳ ಬಳಕೆಯ ವಿಧಾನವನ್ನು ತಿಳಿಯಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಬಿ.ವಿ.ರಾಮಕೃಷ್ಣಪ್ಪ ಸಲಹೆ ನೀಡಿದರು.