ವಕೀಲ ಪ್ರಶಾಂತ್ ಪಟೇಲ್ ಎಂಬುವರು ಲಾಭದಾಯಕ ಹುದ್ದೆಗಳನ್ನು ಹೊಂದಿರುವ ಜನಪ್ರತಿನಿಧಿಗಳನ್ನು ಅನರ್ಹಗೊಳಿಸುವಂತೆ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸಲ್ಲಿಸಿರುವ ಅರ್ಜಿಗಳನ್ನು ಕೈಬಿಡುವಂತೆ ಶಾಸಕರು ಆಯೋಗವನ್ನು 2017ರ ಜೂನ್ ತಿಂಗಳಲ್ಲಿ ಕೋರಿದ್ದರು. ಅವರ ಮನವಿಯನ್ನು ಆಯೋಗ ತಿರಸ್ಕರಿಸಿತ್ತು. ತಮ್ಮನ್ನು ಅನರ್ಹಗೊಳಿಸದಂತೆ ಶಾಸಕರು ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯೂ ಸಹ ತಿರಸ್ಕೃತಗೊಂಡಿತ್ತು.