‘ಗ್ರಾಮದಲ್ಲಿ ಸುಮಾರು 300 ಮನೆಗಳಿವೆ. ಅನಿಲ ಸೋರಿಕೆ ಆಗ ತೊಡಗಿದ್ದರಿಂದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಹಾಗಾಗಿ, ಅಪಾಯ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಕೂಡಲೇ ಅವರನ್ನು ಸ್ಥಳಾಂತರಿಸಬೇಕು ಎಂದು ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತುಸೇವಾ ಇಲಾಖೆಗಳಿಗೆ ನಿರ್ದೇಶನ ನೀಡಿದ್ದೆವು’ ಎಂದು ಉಪವಿಭಾಗಾಧಿಕಾರಿ ಮಹಾದೇವ್ ಅರೊಂಡೆಕರ್ ಹೇಳಿದ್ದಾರೆ.