ವಿಚಾರಣೆ ವೇಳೆ ಅಶೋಕ್ ಪರ ವಕೀಲರು ವಾದ ಮಂಡಿಸಿ, ‘ಅರ್ಜಿದಾರರ ವಿರುದ್ಧ ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ದೂರು ದಾಖಲಿಸಲಾಗಿದೆ. ದೂರುದಾರರು ಕಾಂಗ್ರೆಸ್ಗೆ ಸೇರಿದವರಾಗಿದ್ದಾರೆ. ಇದೊಂದು ಹಳೆಯ ಪ್ರಕರಣವಾಗಿದ್ದು, ಲೋಕಾಯುಕ್ತದಲ್ಲಿ ಇನ್ನೂ ವಿಚಾರಣೆಗೆ ಬಾಕಿ ಇದೆ. ಆದ್ದರಿಂದ ದೂರಿಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಬೇಕು’ ಎಂದರು.