ಸತಾಯಿಸಿದ ಪೊಲೀಸರು: ‘ಕೃತ್ಯ ನಡೆದ ದಿನ ನಾನು ಊರಿನಲ್ಲಿ ಇರಲಿಲ್ಲ. ಕಂಪನಿ ನೌಕರರು ಮಹಿಳೆಯನ್ನು ರಕ್ಷಿಸಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಹೋದ ಪೊಲೀಸರು, ಯಾವುದೇ ಕ್ರಮವನ್ನು ತೆಗೆದುಕೊಳ್ಳುವ ಗೋಜಿಗೆ ಹೋಗಲಿಲ್ಲ. ಜ.15ರಂದು ನಾನೇ ಖುದ್ದು ಠಾಣೆಗೆ ತೆರಳಿ ದೂರು ಕೊಟ್ಟೆ. ಅಷ್ಟೇ ಅಲ್ಲದೆ, ಆರೋಪಿ ಅನುಚಿತವಾಗಿ ವರ್ತಿಸಿ ಹೋಗಿರುವುದಕ್ಕೆ ಸಾಕ್ಷ್ಯವಾಗಿ ಸಿ.ಸಿ ಟಿ.ವಿ ಕ್ಯಾಮೆರಾಗಳ ದೃಶ್ಯಗಳನ್ನೂ ನೀಡಿದೆ. ಆದರೆ, ಸಂತ್ರಸ್ತೆಯ ಹೇಳಿಕೆ ಇಲ್ಲದೆ ಪ್ರಕರಣ ದಾಖಲಿಸುವುದಿಲ್ಲ ಎಂದು ಪೊಲೀಸರು ಪಟ್ಟು ಹಿಡಿದರು’ ಎಂದು ಪ್ರಕಾಶ್ ಕೋಟ ಆರೋಪಿಸಿದ್ದಾರೆ.