ಮಂಗಳೂರು: ಸಂವಿಧಾನದ ಬದಲಾವಣೆ ಸಾಧ್ಯವಿಲ್ಲ. ತಿದ್ದುಪಡಿ ಮಾತ್ರ ತರಬಹುದಾಗಿದೆ. ಈ ಕುರಿತು ಅನಂತಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೆ ವಿರೋಧವಿದೆ. ಬಿಜೆಪಿ ಕೂಡ ಈ ಹೇಳಿಕೆಯಿಂದ ದೂರ ಉಳಿದಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿದೆ ಎಂದು ಹೇಳಿದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಪ್ರಕರಣ ಹೆಚ್ಚಾಗಿದೆ ಎನ್ನುವುದು ಸರಿಯಲ್ಲ. ದಲಿತರ ಮೇಲಿನ ದೌರ್ಜನ್ಯ ಮೊದಲಿನಿಂದಲೂ ನಡೆಯುತ್ತಲೇ ಇವೆ ಎಂದರು.