ಯಮುನಾನಗರ (ಹರಿಯಾಣ): ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶುಪಾಲರನ್ನು ಅವರ ಕೊಠಡಿಯಲ್ಲೇ ಶನಿವಾರ ಗುಂಡಿಟ್ಟು ಕೊಲೆ ಮಾಡಿದ್ದಾನೆ.
ಪ್ರಾಂಶುಪಾಲರ ಕೊಠಡಿಗೆ ನುಗ್ಗಿದ ವಿದ್ಯಾರ್ಥಿ ತನ್ನ ತಂದೆಯ ಗನ್ನಿಂದ ಪ್ರಾಂಶುಪಾಲೆ ರಿತು ಚಬ್ರಾ ಅವರ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದ್ಯಾರ್ಥಿ ತಂದೆ ರಿಯಲ್ ಎಸ್ಟೇಟ್ ಆಗಿದ್ದು, ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.