ಅಧ್ಯಕ್ಷರ ಆರೋಪ ಕುರಿತು ಪ್ರತಿಕ್ರಿಯಿಸಿದ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೋಮಶೇಖರ ಹುಲ್ಲೊಳ್ಳಿ, ‘ಮಂಡಳಿ ಆರಂಭವಾದಾಗಿನಿಂದ ಅವ್ಯವಹಾರ ನಡೆದಿರಬಹುದು. ಈ ಮೊದಲಿನ ₹21 ಕೋಟಿ ಕುರಿತು ನನಗೇನು ಮಾಹಿತಿ ಇಲ್ಲ. ಆದರೆ, ನಾನು ಅಧಿಕಾರ ವಹಿಸಿಕೊಂಡಾಗಿನಿಂದ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಪ್ರಸ್ತುತ ಮಂಡಳಿಯಲ್ಲಿ ₹12 ಕೋಟಿ ಠೇವಣಿ ಇದೆ. ₹3 ಕೋಟಿ ಅಭಿವೃದ್ಧಿ ಅನುದಾನ ಬಂದಿದೆ. ಮಂಡಳಿಯಲ್ಲಿ ಉನ್ನತಾಧಿಕಾರಿಗಳ ಹಸ್ತಕ್ಷೇಪ ಇಲ್ಲ. ಆದರೆ, ಇಲಾಖಾ ಆಯುಕ್ತರು ನೀಡಿದ ನಿರ್ದೇಶನಗಳನ್ನು ನಾವು ಪಾಲಿಸಬೇಕಾಗುತ್ತದೆ’ ಎಂದು ಸಮಜಾಯಿಷಿ ನೀಡಿದರು.