ವ್ಯಾಪಾರ ಕೊರತೆ ಅಂತರ ಹೆಚ್ಚಾಗಿರುವುದು, ಕಚ್ಚಾ ತೈಲ ಬೆಲೆ ಏರಿಕೆ ಆತಂಕ ಸೃಷ್ಟಿಸಿತ್ತು. ಆದರೆ, ಕೇಂದ್ರ ಸರ್ಕಾರ ಮಾರುಕಟ್ಟೆಯಿಂದ ಪಡೆಯುವ ಸಾಲದ ಮೊತ್ತ ತಗ್ಗಿಸಲು ನಿರ್ಧರಿಸಿರುವುದು, ಬ್ಯಾಂಕ್ಗಳಲ್ಲಿ ವಿದೇಶಿ ನೇರ ಬಂಡವಾಳ (ಎಫ್ಡಿಐ) ಹೂಡಿಕೆ ಮಿತಿ ಹೆಚ್ಚಿಸುವ ಕುರಿತಾದ ವರದಿ, ಹಾಗೂ 82ಕ್ಕೂ ಹೆಚ್ಚಿನ ಸರಕು ಮತ್ತು ಸೇವೆಗಳ ಜಿಎಸ್ಟಿ ದರ ತಗ್ಗಿಸಿರುವುದು ಸಕಾರಾತ್ಮಕ ವಹಿವಾಟಿಗೆ ಉತ್ತೇಜನ ನೀಡಿತು ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.