ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ

Last Updated 21 ಜನವರಿ 2018, 8:47 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕಾರ್ಯಕ್ಕೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸ್ಥಾಪಿಸಲಾಗಿರುವ ಖರೀದಿ ಕೇಂದ್ರದಲ್ಲಿ ಕಾಂಗ್ರೆಸ್‌ ಬ್ಲಾಕ್‌ ಘಟಕದ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ,‘ತೊಗರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದ ಸಂದರ್ಭದಲ್ಲಿ ಖರೀದಿಸಲು ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈಗಾಗಲೇ ನೋಂದಣಿ ಮಾಡಿಸಿದ ರೈತರು ತೊಗರಿ ಮಾರಾಟ ಮಾಡುವ ಮೂಲಕ ಬೆಂಬಲ ಬೆಲೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಬಾಲಚಂದ್ರ ಮುಂಜಾನೆ, ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ, ಗ್ರೇಡ್–2 ತಹಶೀಲ್ದಾರ್ ಪಿ.ಜೆ.ಪವಾರ, ದಯಾನಂದ ಜಾಲಗೇರಿ, ನಜೀರ್ ಗಣಿ, ನಿಸಾರ ಚೌಧರಿ, ಸಂಗಮೇಶ ಓಲೇಕಾರ, ವೈ.ಡಿ,ನಾಯ್ಕೋಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT