ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳು ಮತದಾರರಿಗೆ ಹಣ, ಚಿನ್ನ, ಬೆಳ್ಳಿ, ಮದ್ಯ, ಊಟ... ಇತ್ಯಾದಿಗಳ ಆಮಿಷವನ್ನು ಒಡ್ಡಿದ್ದಾರೆ ಎಂದು ವರದಿಯಾಗಿದೆ (ಪ್ರ.ವಾ., ಜ. 20). ಇದು ತೀರಾ ಆಘಾತಕಾರಿ ಸಂಗತಿ. ‘ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಪರೋಕ್ಷವಾಗಿ ನಿಯಂತ್ರಿಸುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ’ ಎಂದೂ ವರದಿ ಹೇಳಿದೆ. ಇದು ಸಹ ಅಷ್ಟೇ ಆತಂಕ ಸೃಷ್ಟಿಸುವ ವಿಷಯ.